ಆದಿ ಶಂಕರ
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು. ಶೈವ, ವೈಷ್ಣವ, ಶಾಕ್ತ, ಗಾಣಪತ್ಯ, ಸೌರ ಹಾಗೂ ಸ್ಕಂದ ಮತಗಳನ್ನು ಒಗ್ಗೂಡಿಸಿ, ಷಣ್ಮತ ಪ್ರತಿಷ್ಠಾಪಕರಾದರು. ಆದಿಶಂಕರರು ಭಗವದ್-ಗೀತೆ, ಉಪನಿಷತ್ ಹಾಗು ಬ್ರಹ್ಮ ಸೂತ್ರಗಳಿಗೆ ಭಾಷ್ಯ ಬರೆದ ಮೊದಲ ಆಚಾರ್ಯರಾದರು.
ಆದಿ ಶಂಕರಾಚಾರ್ಯ | |
---|---|
![]() ಶಿಷ್ಯಂದಿರ ಜೊತೆ ಆದಿ ಶಂಕರ, ರಾಜ ರವಿ ವರ್ಮರವರಿಂದ (೧೯೦೪) | |
ಜನನ | ೭೮೮ CE[1] Kaladi, Chera Kingdom present day Kerala, India |
ಮರಣ | ೮೨೦ CE[1] (aged 32) ಕೇದಾರನಾಥ, ಪಾಲಾ ರಾಜ್ಯ ಇಂದಿನ ಉತ್ತರಾಖಂಡ, ಭಾರತ |
ಜನ್ಮ ನಾಮ | ಶಂಕರ |
ಗೌರವಗಳು/honours | Expounded ಅದ್ವೈತ ವೇದಾಂತ |
Founder of | ದಶನಾಮಿ ಸಂಪ್ರದಾಯ, ಅದ್ವೈತ ವೇದಾಂತ, Shanmata |
ಗುರು | ಗೋವಿಂದ ಭಗವತ್ಪಾದ |
ತತ್ವಶಾಸ್ತ್ರ | ಅದ್ವೈತ ವೇದಾಂತ |
ಹಿಂದೂ ತತ್ತ್ವಶಾಸ್ತ್ರ ಸರಣಿಯ ಲೇಖನ | |
![]() | |
ಪಂಥಗಳು | |
---|---|
ಸಾಂಖ್ಯ · ನ್ಯಾಯ | |
ವೈಶೇಷಿಕ · ಯೋಗ | |
ಪೂರ್ವ ಮೀಮಾಂಸಾ · ವೇದಾಂತ | |
ವೇದಾಂತ ಪಂಥಗಳು | |
ಅದ್ವೈತ · ವಿಶಿಷ್ಟಾದ್ವೈತ | |
ದ್ವೈತ | |
ಪ್ರಮುಖ ವ್ಯಕ್ತಿಗಳು | |
ಕಪಿಲ · ಗೋತಮ | |
ಕಣಾದ · ಪತಂಜಲಿ | |
ಜೈಮಿನಿ · ವ್ಯಾಸ | |
ಮಧ್ಯಕಾಲೀನ | |
ಆದಿಶಂಕರ · ರಾಮಾನುಜ | |
ಮಧ್ವ · ಮಧುಸೂದನ | |
ವೇದಾಂತ ದೇಶಿಕ · ಜಯತೀರ್ಥ | |
ಆಧುನಿಕ | |
ರಾಮಕೃಷ್ಣ · ರಮಣ | |
ವಿವೇಕಾನಂದ · ನಾರಾಯಣ ಗುರು | |
ಅರವಿಂದ ·ಶಿವಾನಂದ | |
ಶ್ರೀ ಶಂಕರರ ಜನನ
ಶಂಕರಾಚಾರ್ಯರ ಕಾಲದ ಬಗ್ಗೆ ವಿದ್ವಾಂಸರಲ್ಲಿ ಇನ್ನೂ ಜಿಜ್ಞಾಸೆಯಿದೆ. ಒಂದು ವಿದದ ಪ್ರಕಾರ ಇವರು 8 ನೇ(ಕ್ರಿ.ಶ್.೭೮೮) ಶತಮಾನದಲ್ಲಿ ಜನಿಸಿದರು ಎಂದು ನಂಬಲಾಗಿದೆ. ಕೇರಳ ರಾಜ್ಯದ ಕಾಲಡಿ ಎಂಬ ಹಳ್ಳಿಯ ಒಂದು ಬಡ ವಿಶ್ವಬ್ರಾಹ್ಮಣ ಕುಟುಂಬದಲ್ಲಿ ಇವರು ಜನಿಸಿದರು. ತಂದೆ ಶಿವಗುರು, ತಾಯಿ ಆರ್ಯಾಂಬೆ. ಹುಟ್ಟಿದ ದಿನ ವಿಭವ ಸಂವತ್ಸರದವೈಶಾಖ ಮಾಸದ ಶುಕ್ಲ ಪಕ್ಷದ ಪಂಚಮೀ ತಿಥಿಯಂದು. ಇವರು ಆತ್ರೇಯ ಗೋತ್ರದ ಯಜುರ್ ವೇದದ ತೈತ್ತ್ರೀಯ ಶಾಖೆಯವರು ಎಂದು ಹೇಳಲಾಗುತ್ತದೆ.ಇವರಿಗೆ ಎಲ್ಲಾ ಮಹಿಳೆಯರೂ ಮಾತೃಸ್ವರೂಪಿಣಿಯರು. ಬಾಲ್ಯದಲ್ಲೇ ತಂದೆ ಯನ್ನು ಕಳೆದುಕೊಂಡರು.[2]
ಶ್ರೀ ಶಂಕರರ ಬಾಲ್ಯದ ವಿವರಗಳು
- ಬಾಲ್ಯದಲ್ಲೇ ತಂದೆಯನ್ನು ಕಳೆದುಕೊಂಡರು. ಆಧ್ಯಾತ್ಮಿಕತೆಯಲ್ಲಿ ಆಸಕ್ತಿತಳೆದ ಇವರು ಸನ್ಯಾಸತ್ವವನ್ನು ಸ್ವೀಕರಿಸುವತ್ತ ಒಲವು ತೋರಿದರು. ಆದರೆ ಒಬ್ಬನೇ ಮಗನಾಗಿದ್ದ ಶಂಕರ ರನ್ನು ಸನ್ಯಾಸಿಯಾಗಿ ನೋಡಲು ತಾಯಿಗೆ ಮನಸ್ಸಿರಲಿಲ್ಲ. ಹಾಗಾಗಿ ತಾಯಿಯ ಮನವೊಲಿಸಲು ಶಂಕರರು ಬಹಳ ಕಷ್ಟಪಡಬೇಕಾಯಿತು. ಆಕೆಯ ಅಂತಿಮ ಕ್ಷಣಗಳಲ್ಲಿ ತಾನು ಎಲ್ಲಿದ್ದರೂ ಆಕೆಯ ಎದುರು ಬಂದು ನಿಲ್ಲುವುದಾಗಿ ಮಾತು ಕೊಟ್ಟ ಶಂಕರರು ಸೂಕ್ತ ಗುರುವಿಗಾಗಿ ಹುಡುಕುತ್ತಾ ತಮ್ಮ ಪಯಣವನ್ನಾರಂಭಿಸಿದರು.
- ತಾಯಿಗೆ ಕೊಟ್ಟ ಮಾತಿನ ಪ್ರಕಾರ ಆಕೆಯ ಕೊನೆಗಾಲದಲ್ಲಿ ಕಾಲಟಿಗೆ ಹಿಂದಿರುಗಿದ ಶಂಕರರು ಆಕೆಯ ಅಂತಿಮ ವಿಧಿಗಳನ್ನು ಪೂರೈಸಿದರು. ನರ್ಮದಾ ನದಿ ತೀರದಲ್ಲಿ ಗೋವಿಂದ ಭಗವತ್ಪಾದರನ್ನು ಭೇಟಿಯಾದ ಶಂಕರರು ಅವರನ್ನು ತನ್ನ ಗುರುಗಳನ್ನಾಗಿ ಸ್ವೀಕರಿಸಿದರು. ಅವರಿಂದ ಯೋಗ, ವೇದ, ಉಪನಿಷತ್, ವೇದಾಂತಗಳನ್ನು ಅಭ್ಯಸಿಸಿದ ನಂತರ ಕಾಶಿಗೆ ತೆರಳಿ ಅಲ್ಲಿ ಕೆಲವರನ್ನು ತಮ್ಮ ಶಿಷ್ಯರನ್ನಾಗಿಸಿಕೊಂಡು ಅವರಿಗೂ ವೇದಾಂತದ ಪಾಠ ಹೇಳಿಕೊಟ್ಟರು.
ಶ್ರೀ ಶಂಕರರ ಜೀವನದ ಮೈಲಿಗಲ್ಲುಗಳು
- ದೇಶದ ಮೂಲೆ ಮೂಲೆಗಳಲ್ಲಿ ಸಂಚರಿಸಿದ ಶಂಕರರು ಅನೇಕರನ್ನು ಅಧ್ಯಾತ್ಮಕ್ಕೆ ಸಂಬಂಧಪಟ್ಟ ವಾದದಲ್ಲಿ ಸೋಲಿಸಿದರು. ಇವುಗಳಲ್ಲಿ ಮಂಡನ ಮಿಶ್ರರನ್ನು ವಾದದಲ್ಲಿ ಸೋಲಿಸಿದ ಘಟನೆ ಬಹು ಪ್ರಮುಖವಾದುದು. ಮಂಡನ ಮಿಶ್ರರೇ ನಂತರ ಶ್ರೀ ಸುರೇಶ್ವರಾಚಾಯ೯ ಎಂಬ ಹೆಸರಿನಿಂದ ಪ್ರಸಿದ್ಧರಾದ ಶಿಷ್ಯರಾದರು.
- ದೇಶದ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಪೀಠ (ಮಠ) ಗಳನ್ನು ಸ್ಥಾಪಿಸಿ, ಪ್ರತಿಯೊಂದು ಪೀಠಕ್ಕೂ ತಮ್ಮ ಒಬ್ಬೊಬ್ಬ ಶಿಷ್ಯರನ್ನು ಪೀಠಾಧಿಪತಿಯನ್ನಾಗಿಸಿದರು."ಅದ್ವೈತ" ಸಿದ್ಧಾಂತ ವನ್ನು ಜನಪ್ರಿಯಗೊಳಿಸಿದರು. ಹಲವಾರು ಪಂಡಿತರನ್ನೂ ಶಾಸ್ತ್ರವೇತ್ತರನ್ನೂ ಜಯಿಸಿ, ಸರ್ವಜ್ಞ ಪೀಠವನ್ನೇರಿದರು. ಭಾರತದ ದಕ್ಷಿಣದಲ್ಲಿ ವಾದ ಮಾಡಿ ತಮ್ಮನ್ನು ಜಯಿಸುವವರೇ ಇಲ್ಲವೆಂದು ಹೀಗೆಳೆದು ಶಾರದೆಯ ದೇಗುಲದ ದಕ್ಷಿಣದ ಬಾಗಿಲನ್ನು ಮುಚ್ಚಿಸಿದ್ದ ಕಾಶ್ಮೀರದ ಪಂಡಿತರ ಬಾಯಿ ಮುಚ್ಚಿಸಿದರು;
ಶ್ರೀ ಶಂಕರರು ಸ್ಥಾಪಿಸಿದ ನಾಲ್ಕು ಪೀಠಗಳು
- ಉತ್ತರದಲ್ಲಿ: ಬದರಿ ಪೀಠ - ಉತ್ತರ ಜ್ಯೋತಿರ್ ಮಠ
- ದಕ್ಷಿಣದಲ್ಲಿ: ಶೃಂಗೇರಿ ಪೀಠ - ದಕ್ಷಿಣ ಶಾರದಾ ಮಠ
- ಪೂರ್ವದಲ್ಲಿ: ಪುರಿ ಪೀಠ - ಪೂರ್ವಾ ಗೋವರ್ಧನ ಮಠ
- ಪಶ್ಚಿಮದಲ್ಲಿ ದ್ವಾರಕಾ ಪೀಠ - ಪಶ್ಚಿಮ ಮಠ
ಈ ನಾಲ್ಕೂ ಮಠಗಳು ಇಂದಿಗೂ ತಮ್ಮ ಗುರು ಪರಂಪರೆಯನ್ನು ಮುಂದುವರಿಸಿಕೊಂಡು ಬಂದಿದ್ದು ಅಸಂಖ್ಯಾತ ಮಂದಿ ಅನುಯಾಯಿಗಳನ್ನು ಹೊಂದಿವೆ. ಶಂಕರರು ಬಾದರಾಯಣರ "ಬ್ರಹ್ಮಸೂತ್ರ" (ವೇದಾಂತಸೂತ್ರ / ಶಾರೀರಿಕ ಸೂತ್ರ )ಗಳಿಗೆ ಭಾಷ್ಯವನ್ನು ರಚಿಸಿದರು. ಅಲ್ಲದೆ ಉಪನಿಷತ್ತುಗಳಿಗೆ ಮತ್ತು ಶ್ರೀಮದ್ಭಗವದ್ಗೀತೆಗೆ ಭಾಷ್ಯವನ್ನು ಬರೆದು ಪ್ರಸ್ಥಾನತ್ರಯಗಳನ್ನು ಪೂರ್ಣಗೊಳಿಸಿದರು. ಇವರು ರಚಿಸಿದ "ಭಜ ಗೋವಿಂದಮ್" ಸ್ತೋತ್ರ ಅತ್ಯಂತ ಪ್ರಸಿದ್ಧವಾದುದು. ಹಲವಾರು ಇತರ ಸ್ತೋತ್ರಗಳನ್ನೂ ಶಂಕರರು ರಚಿಸಿದ್ದಾರೆ
"ಅದ್ವೈತ" ಸಿದ್ಧಾಂತ
- ಸಂಸ್ಕೃತದಲ್ಲಿ "ದ್ವಿ" ಎಂದರೆ ಎರಡು ಎಂದರ್ಥ. ಹಾಗಾಗಿ "ಅ" + "ದ್ವೈತ" ಅಂದರೆ "ಎರಡಲ್ಲದ್ದು" ಎಂದು ಅರ್ಥೈಸಬಹುದು. ಅದ್ವೈತ ಸಿಧ್ಧಾಂತದ ಮೂಲ ಸಾರವೇ ಇದು. "ಆತ್ಮ" ಮತ್ತು "ಪರಮಾತ್ಮ" ಎಂಬುದು ಎರಡು ಬೇರೆ ಬೇರೆ ಅಂಶಗಳಲ್ಲ. ಇರುವುದು ಒಂದೇ. ಆತ್ಮನೇ ಪರಮಾತ್ಮನು . ಪರಮಾತ್ಮನೇ ಆತ್ಮನು.
- "ಅಹಂ ಬ್ರಹ್ಮಾಸ್ಮಿ" (ನನ್ನೊಳಿರುವ ಆತ್ಮವೇ ಪರಂಬ್ರಹ್ಮ), "ತತ್ ತ್ವಮ್ ಅಸಿ" (ನೀನು ಅದೇ ಆತ್ಮದಿಂದ ಆಗಿರುವೆ) ಎಂಬುದು ಅದ್ವೈತ ತತ್ವದ ಮೂಲ ಮಂತ್ರ. ಇದಲ್ಲದೇ ಆದಿ ಶಂಕರಾಚಾರ್ಯರು ಪರಮಾತ್ಮ, ಅಂದರೆ "ಆತ್ಮ", ಅದು ಮಾತ್ರ ಸತ್ಯ; ಈ ಜಗತ್ತಿ ನಲ್ಲಿ ಮಿಕ್ಕೆಲ್ಲವೂ ಮಿಥ್ಯ ಹಾಗೂ "ಸರ್ವಂ ಬ್ರಹ್ಮಮಯಂ ಜಗತ್" (ಈ ಜಗತ್ತಿನಲ್ಲಿ ಎಲ್ಲವೂ ಪರಮಾತ್ಮನಿಂದಲೇ ಆವರಿಸಲ್ಪಟ್ಟಿದೆ) ಎಂಬುದಾಗಿ ಜಗತ್ತಿಗೆ ಸಾರಿದರು.1
ಮೌನವೇ ವ್ಯಾಖ್ಯಾನ
- ಶಂಕರ ಕೃತ ದಕ್ಷಿಣಾಮೂರ್ತಿಸ್ತೋತ್ರದಲ್ಲಿ ಒಂದು ವಿಚಿತ್ರವಾದ ಮಾತಿದೆ:
- ಚಿತ್ರಂ ವಟತರೋರ್ಮೂಲೇ ವೃದ್ಧಾಃ ಶಿಷ್ಯಾ ಗುರೂರ್ಯುವಾ|
- ಗುರೋಸ್ತು ಮೌನಂ ವ್ಯಾಖ್ಯಾನಂ ಶಿಷ್ಯಾಸ್ತುಚ್ಛಿನ್ನಸಂಶಯಾಃ||
- ಇದರ ಅರ್ಥ ಹೀಗೆ: ವಿಚಿತ್ರವಾದ ಸಂಗತಿ ಎಂದರೆ, ಆಲದ ಮರದ ಕೆಳಗೆ ವೃದ್ಧರಾದ ಶಿಷ್ಯರೂ ಮತ್ತು ಯುವಕನಾದ ಗುರುವೂ ಕುಳಿತಿದ್ದಾರೆ. ಗುರುವಿನ ಮೌನವೇ ವ್ಯಾಖ್ಯಾನವಾಗಿದೆ. ಅದರಿಂದಲೇ ಶಿಷ್ಯರ ಸಂಶಯಗಳೆಲ್ಲಾ ಪರಿಹಾರವಾಗುತ್ತಿದೆ.[3]
ಹೊರಕೊಂಡಿಗಳು
- ಕಾಲ್ನಡಿಗೆಯಲ್ಲೇ ಸಮೈಕ್ಯತೆ ಸಾರಿದ ಶ್ರೀ ಶಂಕರರು, ವಿಜಯ ಕರ್ನಾಟಕ, ೨೩ಏಪ್ರಿಲ್೨೦೧೫
- ಲೋಕಗುರು ಶಂಕರ, ವಿಜಯವಾಣಿ, ೨೩ಏಪ್ರಿಲ್೨೦೧೫
- ಆದಿಶಂಕರಾಚಾರ್ಯ, ಸಂಸ್ಕೃತಿ ಸಲ್ಲಾಪ (ಸಲ್ಲಾಪ.ಕಾಂ)
- ದಕ್ಷಿಣಾಮೂರ್ತಿಸ್ತೋತ್ರ:ಮೌನವೇ ಗುರುವಿನ ವ್ಯಾಖ್ಯಾನ;4 Sep, 2017
- ಶ್ರೀಮದ್ ಆದಿ ಶಂಕರಾಚಾರ್ಯರು
- ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಆದಿಶಂಕರಾಚಾರ್ಯ
ಈ ಪುಟಗಳನ್ನೂ ನೋಡಿ
ಉಲ್ಲೇಖ
- Sharma 1962, p. vi.
- "SANKARA'S LIFE".
- http://www.prajavani.net/news/article/2017/09/04/517603.html 4 Sep, 2017