ರಾಜಾರಾಮ ಗಿರಿಧರಲಾಲ ದುಬೆ

ರಾಜಾರಾಮ ಗಿರಿಧರಲಾಲ ದುಬೆಯವರು ಸ್ವಾತಂತ್ರ್ಯ ಹೋರಾಟಗಾರರು, ಮಾಜಿ ಸಂಸದರು ಹಾಗೂ ರಾಜಕೀಯ ಧುರೀಣರು.

ರಾಜಾರಾಮ ಗಿರಿಧರಲಾಲ ದುಬೆ
ಜನನ30ನೇ ಜೂನ್ 1913
ಸೊಲ್ಲಾಪುರ, ಮಹಾರಾಷ್ಟ್ರ
ವೃತ್ತಿರಾಜಕೀಯ
ರಾಷ್ಟ್ರೀಯತೆಭಾರತೀಯ

ಜನನ

ದುಬೆಯವರು 30ನೇ ಜೂನ್ 1913ರಂದು ಮಹಾರಾಷ್ಟ್ರಸೊಲ್ಲಾಪುರ ಜನಿಸಿದರು.

ಹಿನ್ನಲೆ

ರಾಜಾರಾಮ ಗಿರಿಧರಲಾಲ ದುಬೆಯವರು ಉತ್ತರ ಪ್ರದೇಶ ರಾಜ್ಯದ ಮೊಲದವರು.

ನಿರ್ವಹಿಸಿದ ಖಾತೆಗಳು

  • 1951ರಲ್ಲಿ 1ನೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ವಿಜಯಪುರ ಲೋಕಸಭಾ ಕ್ಷೇತ್ರದ ಸಂಸದರಾಗಿ ಮೊದಲ ಬಾರಿ ಸಂಸತ್ ಪ್ರವೇಶಿಸಿದ್ದರು.
  • 1951ರಲ್ಲಿ ಜವಾಹರಲಾಲ್ ನೆಹರುರವರ ಸಂಸದೀಯ ಕಾರ್ಯಾದರ್ಶಿಯಾಗಿದ್ದರು.
  • 1957ರಲ್ಲಿ 2ನೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ಸೋಲು.
  • 1962ರಲ್ಲಿ 3ನೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ಆಯ್ಕೆಯಾಗಿದ್ದರು.
  • 1967ರಲ್ಲಿ 4ನೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ಸೋಲು.
  • 1939—41ರಲ್ಲಿ ವಿಜಯಪುರ ನಗರ ಸಭೆಯ ಅಧ್ಯಕ್ಷರಾಗಿದ್ದರು.
  • 1944—48 ಹಾಗೂ 1957—1959ರಲ್ಲಿ ವಿಜಯಪುರ ಜಿಲ್ಲಾ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷರಾಗಿದ್ದರು.
  • 1953—57ರಲ್ಲಿ ಸಂಸತ್ತಿನ ಉತ್ಪಾದನೆ ಸಚಿವಾಲಯದ ಕಾರ್ಯದರ್ಶಿಯಾಗಿದ್ದರು.
  • 1951 - 1953ರಲ್ಲಿ ಕಾರ್ಮಿಕ ಸಹಕಾರ ಸಮಿತಿಯ ಸದಸ್ಯರಾಗಿದ್ದರು.
  • 1950-1952ರಲ್ಲಿ ಜಿಲ್ಲಾ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾಗಿದ್ದರು.
  • 1960 ರಿಂದ ಮೈಸೂರು ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿದ್ದರು.[1]
  • 1968-1970ವರೆಗೆ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿದ್ದರು.
  • ಎಐಸಿಸಿ ಹಾಗೂ ಕೆಪಿಸಿಸಿ ಸದಸ್ಯರಾಗಿದ್ದರು.

ಉಲ್ಲೇಖಗಳು

This article is issued from Wikipedia. The text is licensed under Creative Commons - Attribution - Sharealike. Additional terms may apply for the media files.