ಶ್ರೀ ರಾಮಾಯಣ ದರ್ಶನಂ

"ಶ್ರೀ ರಾಮಾಯಣ ದರ್ಶನಂ"ವು ಮಹಾಕಾವ್ಯವಾದ ರಾಮಾಯಣವನ್ನು[1]ಆಧರಿಸಿ ಕುವೆಂಪುರವರು ರಚಿಸಿದ ಆಧುನಿಕ ಕನ್ನಡ ಸಾಹಿತ್ಯದ ಮೇರು ಕೃತಿಯಾಗಿದ್ದು ಕೇಂದ್ರ ಸಾಹಿತ್ಯ ಅಕಾಡೆಮಿ ಮತ್ತು ೧೯೬೮ ರಲ್ಲಿ 'ಜ್ಞಾನಪೀಠ ಪ್ರಶಸ್ತಿ'ಯನ್ನು ಕುವೆಂಪುರವರಿಗೆ ತಂದೊದಗಿಸಿದೆ.[2].

ಶ್ರೀರಾಮಾಯಣ ದರ್ಶನಂ

__TOC_

ಅರ್ಪಣೆ

ಮಹಾಕಾವ್ಯದ ಆರಂಭದಲ್ಲಿ, ಕವಿ ತಮ್ಮ ನೆಚ್ಚಿನ ಗುರುಗಳಾದ ಶ್ರೀ ವೆಂಕಣ್ಣಯ್ಯರವರಿಗೆ ಕಾವ್ಯದ ಅರ್ಪಣೆ ಮಾಡುವ ಮೂಲಕ ಕಾವ್ಯದ ಮೂಲ ನಿತ್ಯ ಸತ್ಯವನ್ನು ಸಾರುತ್ತ ಕಾವ್ಯೋದ್ದೇಶವನ್ನು ಇಲ್ಲಿ ಸ್ಪಷ್ಟಪಡಿಸಿದ್ದಾರೆ.

ಶ್ರೀ ವೆಂಕಣ್ಣಯ್ಯನವರಿಗೆ


ಇದೊ ಮುಗಿಸಿ ತಂದಿಹೆನ್ ಈ ಬೃಹದ್ ಗಾನಮಂ

ನಿಮ್ಮ ಸಿರಿಯಡಿಗೊಪ್ಪಿಸಲ್ಕೆ, ಓ ಪ್ರಿಯ ಗುರುವೆ.


ಕರುಣಿಸಿಂ ನಿಮ್ಮ ಹರಕೆಯ ಬಲದ ಶಿಷ್ಯನಂ,

ಕಾವ್ಯಮಂ ಕೇಳ್ವೊಂದು ಕೃಪೆಗೆ ಕೃತ ಕೃತ್ಯನಂ

ಧನ್ಯನಂ ಮಾಡಿ. ನೀಮುದಯರವಿಗೈತಂದು

ಕೇಳಲೆಳಸಿದಿರಂದು. ಕಿರುಗವನಗಳನೋದಿ

ಮೆಚ್ಚಿಸಿದೆನನಿತರೊಳೆ ಬೈಗಾಯ್ತು. “ಮತ್ತೊಮ್ಮೆ


ಬರುವೆ. ದಿನವೆಲ್ಲಮುಂ ಕೇಳ್ವೆನೋದುವೆಯಂತೆ ;

ರಾಮಾಯಣಂ ಅದು ವಿರಾಮಾಯಣಂ ಕಣಾ !”

ಎಂದು ಮನೆಗೈದಿದಿರಿ. ಮನೆಗೈದಿದಿರಿ ದಿಟಂ ;

ದಿಟದ ಮನೆಗೈದಿದಿರಿ !

ಇದೊ ಬಂದಿರುವೆನಿಂದು

ಮುಗಿಸಿ ತಂದಿಹೆನಾ ಮಹಾಗಾನಮಂ. ಪಿಂತೆ

ವಾಲ್ಮೀಕಿಯುಲಿದ ಕಥೆಯಾದೊಡಂ, ಕನ್ನಡದಿ

ಬೇರೆ ಕಥೆಯೆಂಬಂತೆ, ಬೇರೆ ಮೈಯಾಂತಂತೆ,

ಮರುವುಟ್ಟುವಡೆದಂತೆ ಮೂಡಿದೀ ಕಾವ್ಯಮಂ

ವಿಶ್ವವಾಣಿಗೆ ಮುಡಿಯ ಮಣಿ ಮಾಡಿಹೆನ್, ನಿಮ್ಮ

ಕೃಪೆಯಿಂದೆ.- ಪೂರ್ವದ ಮಹಾಕವಿಗಳೆಲ್ಲರುಂ

ನೆರೆದ ಸಗ್ಗದ ಸಭೆಗೆ ಪರಿಚಯಿಸಿರೆನ್ನನುಂ :

ಸಂಘಕೆ ಮಹಾಧ್ಯಕ್ಷರಲ್ತೆ ನೀಂ ? ಕಿರಿಯನಾಂ

ಹಿರಿಯರಿಗೆ ಹಾಡುವೆನ್, ಕೇಳ್ವುದಾಶೀರ್ವಾದಂ !

ನುಡಿಯುತಿಹುದಾ ದಿವ್ಯ ಕವಿಸಭೆಗೆ ಗುರುವಾಣಿ, ಕೇಳ್

ಆಲಿಸಾ ಗುರುಕೃಪೆಯ ಶಿಷ್ಯ ಕೃತಿ ಸಂಕೀರ್ತಿಯಂ :

“ಬಹಿರ್ಘಟನೆಯಂ ಪ್ರತಿಕೃತಿಸುವಾ ಲೌಕಿಕ

ಚರಿತ್ರೆಯಲ್ತಿದು, ಅಲೌಕಿಕ ನಿತ್ಯ ಸತ್ಯಂಗಳಂ

ಪ್ರತಿಮಿಸುವ ಸತ್ಯಸ್ಯ ಸತ್ಯ ಕಥನಂ ಕಣಾ,

ಶ್ರೀ ಕುವೆಂಪುವ ಸೃಜಿಸಿದೀ ಮಹಾಛಂದಸಿನ

ಮೇರುಕೃತಿ, ಮೇಣ್ ಜಗದ್ಭವ್ಯ ರಾಮಾಯಣಂ !

ಬನ್ನಿಮಾಶೀರ್ವಾದಮಂ ತನ್ನಿಮಾವಿರ್ಭವಿಸಿ

ಅವತರಿಸಿಮೀ ಪುಣ್ಯಕೃತಿಯ ರಸಕೋಶಕ್ಕೆ,

ನಿತ್ಯ ರಾಮಾಯಣದ ಹೇ ದಿವ್ಯ ಚೇತನಗಳಿರ !

ವಾಗರ್ಥ ರಥವೇರಿ, ಭಾವದಗ್ನಿಯ ಪಥಂ

ಬಿಡಿದು ಬನ್ನಿಂ, ಸಚ್ಚಿದಾನಂದ ಪೂಜೆಯಂ

ಸಹೃದಯ ಹೃದಯ ಭಕ್ತಿ ನೈವೇದ್ಯಮಂ ಕೊಂಡು

ಓದುವರ್ಗಾಲಿಪರ್ಗೊಲಿದೀಯೆ ಚಿತ್ಕಾಂತಿಯಂ !

ನಿತ್ಯಶಕ್ತಿಗಳಿಂತು ನೀಂ ಕಥೆಯ ಲೀಲೆಗೆ ನೋಂತು

ರಸರೂಪದಿಂದಿಳಿಯುತೆಮ್ಮೀ ಮನೋಮಯಕೆ,

ಪ್ರಾಣಮಯದೊಳ್ ಚರಿಸುತನ್ನಮಯಕವತರಿಸೆ ;-

ಶ್ರೀ ರಾಮನಾ ಲೋಕದಿಂದವತರಿಸಿ ಬಂದು

ಈ ಲೋಕಸಂಭವೆಯನೆಮ್ಮ ಭೂಜಾತೆಯಂ

ಸೀತೆಯಂ ವರಿಸುತಾಕೆಯ ನೆವದಿ ಮೃಚ್ಛಕ್ತಿಯಂ

ಮರ್ದಿಸುತೆ, ಸಂವರ್ಧಿಸಿರ್ಪವೋಲ್ ಚಿಚ್ಛಕ್ತಿಯಂ;-

ರಾವಣಾವಿದ್ಯೆಯೀ ನಮ್ಮ ಮರ್ತ್ಯಪ್ರಜ್ಞೆ ತಾಂ

ತನ್ನ ತಮದಿಂ ಮುಕ್ತಮಪ್ಪುದು, ದಿಟಂ, ನಿಮ್ಮ

ದೀಪ್ಯ ದೈವೀ ಪ್ರಜ್ಞೆಯಮೃತ ಗೋಪುರಕೇರ್ವವೋಲ್ !

ಓ ಬನ್ನಿಮವತರಿಸಿಮೀ ಮೃತ್ಕಲಾ ಪ್ರತಿಮೆಯೊಳ್

ಚಿತ್ಕಲಾ ಪ್ರಾಣಂ ಪ್ರತಿಷ್ಠಿತಂ ತಾನಪ್ಪವೋಲ್ !

ಸಂಪುಟಗಳು

ನಾಲ್ಕು ಸಂಪುಟಗಳನ್ನು ೫ ಸಂಚಿಕೆಗಳಲ್ಲಿ ಒಟ್ಟು ೨೨೨೯೧ ಸಾಲುಗಳಲ್ಲಿ ಬರೆದಿದ್ದಾರೆ.

ಅಯೋಧ್ಯಾ ಸಂಪುಟಂ

  1. ಕವಿಕ್ರತು ದರ್ಶ

ನಂ (೭೧೪)

  1. ಶಿಲಾ ತಪಸ್ವಿನಿ (೬೮೭)
  2. ಮಮತೆಯ ಸುಳಿ ಮಂಥರೆ (೬೨೯)
  3. ಊರ್ಮಿಳಾ (೫೯೩)
  4. ಭರತಮಾತೆ (೩೦೮)
  5. ಅಗ್ನಿಯಾತ್ರೆ (೩೪೨)
  6. ಚಿತ್ರಕೂಟಕೆ (೪೪೦)
  7. ಕುಣಿದಳುರಿಯ ಊರ್ವಶಿ (೨೫೦)
  8. ಪಾದುಕಾ ಕಿರೀಟಿ (೬೪೦)
  9. ಅತ್ರಿಯಿಂದಗಸ್ತ್ಯಂಗೆ (೪೭೯)
  10. ಪಂಚವಟಿಯ ಪರ್ಣಕುಟಿ (೪೧೧)

ಕಿಷ್ಕಿಂದಾ ಸಂಪುಟಂ

  1. ಲಂಕೇಶನೊಲಿಸಿದನು ಮಾರೀಚನಂ (೪೩೮)
  2. ಓ ಲಕ್ಷ್ಮಣಾ! (೯೦೭)
  3. ಶಬರಿಗಾದನು ಅತಿಥಿ ದಾಶರಥಿ (೩೮೫)
  4. ಅತ್ತಲಾ ಕಿಷ್ಕಿಂಧೆಯೊಳ್ (೧೮೮)
  5. ಪೂಣ್ದೆನಗ್ನಿಯೆ ಸಾಕ್ಷಿ! (೪೧೬)
  6. ನೀಂ ಸತ್ಯವ್ರತನೆ ದಿಟಂ! (೪೬೫)
  7. ಸಂಸ್ಕೃತಿ ಲಂಕಾ (೩೧೧)
  8. ನಾನಕ್ಕನೆನ್ ನಿನಗೆ, ತಂಗೆ! (೨೧೨)
  9. ಸುಗ್ರೀವಾಜ್ಞೆ (೫೮೩)
  10. ಇರ್ದುದು ಮಹೇಂದ್ರಾಚಲಂ (೧೦೯೮)
  11. ಸಾಗರೋಲ್ಲಂಘನಂ (೪೪೧)
  12. ದಶಶಿರ ಕನಕಲಕ್ಷ್ಮಿ (೩೪೮)

ಲಂಕಾ ಸಂಪುಟಂ

  1. ಕನಕಲಂಕಾನ್ವೇಷಣಂ (೭೫೨)
  2. ವನಮಂ ಪೊಕ್ಕನಶೋಕಮಂ (೨೯೪)
  3. ಕಂಡನಾ ಹದಿಬದೆಯರಧಿದೇವಿಯಂ (೩೫೩)
  4. ಅಶ್ರುಗಂಗೋತ್ರಿ (೭೧೭)
  5. ಕಿವಿಗೊಟ್ಟನವನಿಜಾ ರಮಣಂ (೨೯೪)
  6. ರಣವ್ರತರ್ ವಹ್ನಿರಂಹರ್ (೨೯೭)
  7. ಅತ್ತಲಾ ದೈತ್ಯ ಸಭೆಯೊಳ್ (೬೧೮)
  8. ನಿನ್ನಮಗಳಲ್ತೆನ್ನವಳ್ ಅನಲೆ! (೨೩೨)
  9. ಮರಣಮಥವಾ ಶರಧಿತರಣಂ! (೪೫೪)
  10. ಶುಕಂ ಸಾರಣಂವೆರಸಿ (೨೩೪)
  11. ಸಫಲಮಾಯ್ತಾ ರಾಯಭಾರಂ (೧೬೬)
  12. ಸೈನ್ಯ ಗುಪ್ತಿ (೩೦೫)
  13. ಸ್ವಪ್ನದೇವಿಗೆ ತಪೋಲಕ್ಷ್ಮಿ (೩೨೨)
  14. ಅದ್ವಿತೀಯಮಾ ದ್ವಿತೀಯಂ ದಿನಂ (೪೭೦)

ಶ್ರೀ ಸಂಪುಟಂ

  1. ಕುಂಭಕರ್ಣನನೆಬ್ಬಿಸಿಮ! (೪೩೩)
  2. ರಸಮಲ್ತೆ ರುದ್ರದೃಷ್ಟಿಗೆ ರೌದ್ರಮುಂ! (೫೨೨)
  3. ದೂರಮಿರದಿನ್ ಸುಗತಿ! (೨೬೮)
  4. ಮಡಿದನಿಂದ್ರಜಿತು ಐಂದ್ರಾಸ್ತ್ರದಿಂ (೬೬೧)
  5. ನೀಂ ಮಹಚ್ಛಿಲ್ಪಿ ದಿಟಂ! (೩೭೨)
  6. ಶ್ರೀರಾಮ ರಾವಣ ಚಿತ್‌ತಪಸ್‌ಶ್ರೀ (೪೬೧)
  7. ದಶಾನನ ಸ್ವಪ್ನಸಿದ್ಧಿ (೩೩೦)
  8. ಅರಾವಣಂ ವಾ ಅರಾಮಂ ದಿಟಂ! (೫೦೦)
  9. ಸೆರೆ ಸಿಲ್ಕಿದನೊ ವೈರಿ! (೨೬೨)
  10. ದೈತ್ಯನೇರ್ದನ್ ಚೈತ್ಯಮಂಚಮಂ (೩೮೫)
  11. ರಯಗೆ ಕರೆದೊಯ್, ಓ ಅಗ್ನಿ! (೬೦೮)
  12. ತಪಸ್ಸಿದ್ಧಿ (೪೫೮)
  13. ಅಭಿಷೇಕ ವಿರಾಟ್ ದರ್ಶನಂ (೨೩೮)

ಬಾಹ್ಯ ಕೊಂಡಿಗಳು

www.kannadadeevige.blogspot.in

ಉಲ್ಲೇಖಗಳು

ರಾಮಾಯಣ

This article is issued from Wikipedia. The text is licensed under Creative Commons - Attribution - Sharealike. Additional terms may apply for the media files.