ಸುನಂದಾ ಬೆಳಗಾಂವಕರ
ಸುನಂದಾ ಬೆಳಗಾವಕರ ಇವರು ಧಾರವಾಡದ ಮಹಿಷಿ ಕುಟುಂಬದವರು. ವಿವಾಹದ ನಂತರ ಆಫ್ರಿಕಾ ಖಂಡದ ಝಾಂಬಿಯಾ ದೇಶದಲ್ಲಿ ತಮ್ಮ ಪತಿಯೊಡನೆ ಮೂವತ್ತು ವರ್ಷ ಕಳೆದು, ಬಳಿಕ ಭಾರತಕ್ಕೆ ಹಿಂತಿರುಗಿದರು.
ಸಾಹಿತ್ಯ
ಸುನಂದಾ ಬೆಳಗಾವಕರರವರು ಬರೆದ “ಕಜ್ಜಾಯ” ಸುಧಾ ವಾರಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟವಾಗಿ ಲೇಖಕಿಗೆ ಅಪಾರ ಜನಪ್ರಿಯತೆಯನ್ನು ತಂದುಕೊಟ್ಟಿತು. ಇದಲ್ಲದೆ ಇವರು "ಶಾಲ್ಮಲಿ" ಎನ್ನುವ ಕಾವ್ಯಸಂಕಲನವನ್ನು, “ನಾಸು” ಹಾಗು “ಝವೇರಿ” ಎನ್ನುವ ಎರಡು ಕಾದಂಬರಿಗಳನ್ನು ಬರೆದಿದ್ದಾರೆ.
ಸುನಂದಾ ಬೆಳಗಾವಕರ ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.
ಕೃತಿಗಳು
- ಕಜ್ಜಾಯ (ಪ್ರಬಂಧಗಳು)(೧೯೭೯)
- ನಾಸು(ಕಾದಂಬರಿ)(೧೯೮೯)
- ಕೈತುತ್ತು(ಕಥಾ ಸಂಗ್ರಹ)(೧೯೯೧)
ಪ್ರಶಸ್ತಿ
"ನಾಸು" ಕಾದಂಬರಿಗೆ ೧೯೯೦ ರಲ್ಲಿಕರ್ನಾಟಕ ವಿದ್ಯಾವರ್ಧಕ ಸಂಘದ ರತ್ನಮ್ಮ ಹೆಗ್ಗಡೆ ಪ್ರಥಮ ಬಹುಮಾನ ಲಭಿಸಿದೆ.
This article is issued from
Wikipedia.
The text is licensed under Creative
Commons - Attribution - Sharealike.
Additional terms may apply for the media files.